ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ಹುತಾತ್ಮ ಯೋಧ ಅಗ್ನಿವೀರ್ ಕುಟುಂಬಕ್ಕೆ ನೆರವು ನೀಡುವ ಬಗ್ಗೆ ಸಂಸತ್ತಿನಲ್ಲಿ ಸುಳ್ಳು ಹೇಳಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ತಿಳಿಸಿದರು.
ಎಕ್ಸ್ನಲ್ಲಿ ಅಗ್ನಿವೀರ್ (Agniveer) ಬಗ್ಗೆ ಮಾತನಾಡಿರುವ ಅವರು, ಸತ್ಯದ ರಕ್ಷಣೆ ಪ್ರತಿಯೊಂದು ಧರ್ಮದ ಆಧಾರವಾಗಿದೆ. ಆದರೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಹುತಾತ್ಮ ಯೋಧ ಅಗ್ನಿವೀರ್ ಕುಟುಂಬಕ್ಕೆ ನೆರವು ನೀಡುವ ಬಗ್ಗೆ ಸಂಸತ್ತಿನಲ್ಲಿ ಸುಳ್ಳು ಹೇಳಿದ್ದಾರೆ ಎಂದು ಕಿಡಿಕಾರಿದರು.
ಹುತಾತ್ಮ ಯೋಧ ಅಗ್ನಿವೀರ್ ಅಜಯ್ ಸಿಂಗ್ ಅವರ ಸುಳ್ಳುಗಳ ಬಗ್ಗೆ ಅವರ ತಂದೆಯೇ ಸತ್ಯವನ್ನು ಹೇಳಿದ್ದಾರೆ. ರಕ್ಷಣಾ ಸಚಿವರು ಸಂಸತ್ತು, ದೇಶ, ಸೇನೆ ಮತ್ತು ಹುತಾತ್ಮ ಅಗ್ನಿವೀರ್ ಅಜಯ್ ಸಿಂಗ್ ಅವರ ಕುಟುಂಬದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದರು.
सत्य की रक्षा हर धर्म का आधार है!
लेकिन रक्षा मंत्री राजनाथ सिंह ने शहीद अग्निवीर के परिवार को सहायता मिलने के बारे में संसद में झूठ बोला।
उनके झूठ पर शहीद अग्निवीर अजय सिंह के पिता जी ने खुद सच्चाई बताई है।
रक्षा मंत्री को संसद, देश, सेना और शहीद अग्निवीर अजय सिंह जी के… pic.twitter.com/H2odxpfyOO
— Rahul Gandhi (@RahulGandhi) July 3, 2024