ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಹಿನ್ನಡೆ ಉಂಟಾದರೆ ರಾಜೀನಾಮೆ ನೀಡುವುದಾಗಿ ಶಪಥ ಮಾಡಿದ್ದ ಬಿಜೆಪಿ ನಾಯಕ ಕಿರೋಡಿ ಲಾಲ್ ಮೀನಾ ರಾಜಸ್ಥಾನ್ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
72 ವರ್ಷದ ಕಿರೋಡಿಲಾಲ್ ಮೀನಾ ಲೋಕಸಭಾ ಚುನಾವಣೆಯಲ್ಲಿ ರಾಜಸ್ಥಾನದಲ್ಲಿ ತವರೂರು ದೌಸಾದಲ್ಲಿ ನಿರೀಕ್ಷಿತ ಸ್ಥಾನ ಬಾರದೇ ಇದ್ದರೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು.
ಕಿರೋಡಿಲಾಲ್ ಮೀನಾ ಕೊಟ್ಟ ಮಾತಿನಂತೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಳೆದ 10 ದಿನಗಳ ಹಿಂದೆಯೇ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗೆ ತಲುಪಿಸಿದ್ದಾರೆ ಎಂದು ಬಿಜೆಪಿ ತಿಳಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ರಾಜಸ್ಥಾನದಲ್ಲಿ 25 ಸ್ಥಾನಗಳ ಪೈಕಿ 14ರಲ್ಲಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ ದೌಸಾ ಸೇರಿದಂತೆ 8 ಕ್ಷೇತ್ರಗಳಲ್ಲಿ ಗೆದ್ದು ಸುಧಾರಣೆ ಕಂಡಿತ್ತು.