ಹಾಸನ : ಅತ್ಯಾಚಾರ ಆರೋಪದಲ್ಲಿ ಜೈಲು ಸೇರಿದ್ದ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಇಂದು ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಕರ್ನಾಟಕ ಹೈಕೋರ್ಟ್ ಅವರಿಗೆ ಜಾಮೀನು ಮಂಜೂರು ಮಾಡಿತ್ತು.
ಹಾಸನ ಜಿಲ್ಲಾ ವಿಚಾರಣಾಧೀನ ನ್ಯಾಯಾಲಯವು ದೇವರಾಜೇಗೌಡಗೆ ಜೂ.5ರಂದು ಜಾಮೀನು ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನಿನ್ನೆ ಜಾಮೀನು ಸಿಕ್ಕ ಈ ಹಿನ್ನೆಲೆ ಇಂದು ಹಾಸನದ ಜಿಲ್ಲಾ ಕಾರಾಗೃಹದಿಂದ ಅವರನ್ನು ಬಿಡುಗಡೆ ಮಾಡಲಾಗಿದೆ.
ಹಾಸನದ ಹೊಳೆನರಸೀಪುರ ನಗರ ಠಾಣೆಯಲ್ಲಿ ಏ.1ರಂದು ದೇವರಾಜೇಗೌಡ ವಿರುದ್ಧ ಮಹಿಳೆಯೋರ್ವರು ಲೈಂಗಿಕ ದೌರ್ಜನ್ಯ, ಅತ್ಯಾಚಾರದ ಆರೋಪದಡಿ ದೂರು ದಾಖಲಿಸಿದ್ದರು. ಈ ಸಂಬಂಧ ಮೇ.10 ರಂದು ಹಿರಿಯೂರು ಬಳಿ ದೇವರಾಜೇಗೌಡನನ್ನು ಪೊಲೀಸರು ಬಂಧಿಸಿದ್ದರು. ಇದೀಗ ಜೈಲಿನಿಂದ ಅವರು ರಿಲೀಸ್ ಆಗಿದ್ದಾರೆ.