ಚಿತ್ರದುರ್ಗ: ನಟ ದರ್ಶನ್ & ಗ್ಯಾಂಗ್ನಿಂದ ರೇಣುಕಾಸ್ವಾಮಿಯ ಕೊಲೆ ಪ್ರಕರಣದಿಂದ ಸಂಕಷ್ಟದಲ್ಲಿರುವ ಸ್ವಾಮಿ ಕುಟುಂಬಕ್ಕೆ ನಟ ಧ್ರುವ ಸರ್ಜಾ ಅವರು ಕರೆ ಮಾಡಿ ಸಾಂತ್ವನ ಹೇಳಿದ್ದಾರೆಂದು ತಿಳಿದುಬಂದಿದೆ.
ಈಗಾಗಲೇ ಚಲನಚಿತ್ರ ವಾಣಿಜ್ಯ ಮಂಡಳಿವತಿಯಿಂದಲೂ ಮೃತನ ಕುಟುಂಬಕ್ಕೆ ಪರಿಹಾರ ನೀಡಲಾಗಿತ್ತು. ಇದರ ಬೆನ್ನಲ್ಲೇ ಧ್ರುವ ಸರ್ಜಾ ಅವರೂ ಫೋನ್ ಮಾಡಿ, ನಿಮ್ಮ ಕುಟುಂಬದ ಸಹಾಯಕ್ಕೆ ನಿಲ್ಲುವುದಾಗಿ ಭರವಸೆ ನೀಡಿದ್ದಾರಂತೆ.
ಸಿನಿಮಾವೊಂದರ ವಿಚಾರವಾಗಿ ಅರ್ಜುನ್ ಸರ್ಜಾ & ದರ್ಶನ್ ನಡುವೆ ವಿವಾದವಾಗಿತ್ತು. ಅದರಿಂದ ಧ್ರುವ ಸರ್ಜಾ ಹಾಗೂ ದರ್ಶನ್ ನಡುವೆ ಸಂಬಂಧ ಸರಿ ಇರಲಿಲ್ಲ ಎಂಬ ಸುದ್ದಿಗಳೂ ಹರಿದಾಡಿದ್ದವು.
ಇನ್ನು ಧ್ರುವ ಸರ್ಜಾ ಅಭಿಮಾನಿಗಳು ಇಂದು ರೇಣುಕಾಸ್ವಾಮಿ ಮನೆಗೆ ತೆರಳಿ ಸಾಂತ್ವನ ಹೇಳಿದ್ದಾರೆ. ಅಲ್ಲದೇ ಮಹಾನ್ ಎಂಬುವವರು ಧನ ಸಹಾಯ ಮಾಡಿದ್ದಾರೆ.
ದರ್ಶನ್ ಆಪ್ತೆ ಪವಿತ್ರಾಗೌಡಳಿಗೆ ಮೃತ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ, ಆತನನ್ನು ಸಂಚು ರೂಪಿಸಿ ಚಿತ್ರದುರ್ಗದಿಂದ ಅಪಹರಿಸಿ ಬೆಂಗಳೂರಿಗೆ ಕರೆತಂದು ಕೊಲ್ಲಲಾಗಿದೆ ಎಂಬ ಆರೋಪವಿದೆ. ಸದ್ಯ ಪ್ರಕರಣದ ಎಲ್ಲ ಆರೋಪಿಗಳು ಜೈಲು ಪಾಲಾಗಿದ್ದಾರೆ.