Sunday, July 7, 2024
Homeಕ್ರೈಂBREAKING : ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್

BREAKING : ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರು ಜೈಲಿಗೆ ಶಿಫ್ಟ್

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್​​​​ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ & ಗ್ಯಾಂಗ್ನ ಕೆಲ ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿನಿಂದ ತುಮಕೂರು ಜಿಲ್ಲೆಯ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲು 24ನೇ ACMM ಕೋರ್ಟ್ ಅನುಮತಿಸಿದೆ ಎಂದು ವರದಿಯಾಗಿದೆ.

ಹತ್ಯೆ ಕೇಸ್​​​​ನಲ್ಲಿ ದರ್ಶನ್ A2 ಆರೋಪಿಯಾಗಿದ್ದು, ದರ್ಶನ್ ಜೊತೆ ಗ್ಯಾಂಗ್​​​ನ ಆರೋಪಿಗಳಾದ A8-ರವಿ, A15-ಕಾರ್ತಿಕ್, A16- ಕೇಶವ ಮೂರ್ತಿ A17-ನಿಖಿಲ್ ನಾಯಕ್ ಇವರುಗಳನ್ನೂ ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.

ರೇಣುಕಾಸ್ವಾಮಿ ಹತ್ಯೆಯಾದ ಬಳಿಕ ಪೊಲೀಸರಿಗೆ ಖುದ್ದು ಬಂದು ತಾವೇ ಕೊಂದಿದ್ದಾಗಿ ಮೊದಲು ಕಾರ್ತೀಕ್‌, ಕೇಶವ್ ಹಾಗೂ ನಿಖಿಲ್ ಎಂಬ ಆರೋಪಿಗಳು ಶರಣಾಗಿದ್ದರು.
ದರ್ಶನ್ ಆಪ್ತೆ ಪವಿತ್ರಾಗೌಡಳನ್ನು ಮೃತ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದ ಎಂಬ ಕಾರಣಕ್ಕೆ, ಆತನನ್ನು ಚಿತ್ರದುರ್ಗದಿಂದ ಬೆಂಗಳೂರಿನ ಪಟ್ಟಣಗೆರೆ ಶೆಡ್​​ಗೆ ಕರೆತಂದು ಥಳಿಸಿ ಹತ್ಯೆ ಮಾಡಲಾಗಿತ್ತು. ಸದ್ಯ ಪ್ರಕರಣದಲ್ಲಿ 17 ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಹೆಚ್ಚಿನ ಸುದ್ದಿ