Sunday, July 7, 2024
Homeಚುನಾವಣೆ 2023H.ANJANEYA: ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬಾಗಿಲು ಬಂದ್: ಹೆಚ್. ಆಂಜನೇಯ

H.ANJANEYA: ದಕ್ಷಿಣ ಭಾರತದಲ್ಲಿ ಬಿಜೆಪಿಗೆ ಬಾಗಿಲು ಬಂದ್: ಹೆಚ್. ಆಂಜನೇಯ

ಚಿತ್ರದುರ್ಗ: ತೆಲಂಗಾಣದಲ್ಲಿ (telangana) ಕಾಂಗ್ರೆಸ್ (Congress) ಜಯಭೇರಿ ಸಾಧಿಸಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಹೆಚ್. ಆಂಜನೇಯ (H.Anjaneya), ತೆಲಂಗಾಣದಲ್ಲಿ ಬಿಜೆಪಿಗೆ (BJP) ಸೋಲಾಗಿದೆ. ಈ ಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿ ಬಾಗಿಲು ಬಂದ್ ಆಗಿದೆ ಎಂಬ ಸಂದೇಶ ರವಾನೆಯಾಗಿದೆ ಎಂದು ಹೇಳಿದ್ದಾರೆ.

ತೆಲಂಗಾಣದಲ್ಲಿ (Telangana) ಕಾಂಗ್ರೆಸ್ ಜಯಭೇರಿ ಬಾರಿಸಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗದಲ್ಲಿ (Chitradurga) ಕಾಂಗ್ರೆಸ್ (Congress) ಕಾರ್ಯಕರ್ತರು ಸಂಭ್ರಮಾಚರಣೆ ಮಾಡಲಾಗಿದ್ದು, ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ನೆರೆದಿದ್ದ ಕಾರ್ಯಕರ್ತರು ಮಾಜಿ ಸಚಿವ ಹೆಚ್. ಆಂಜನೇಯ (H.Anjaneya) ನೇತೃತ್ವದಲ್ಲಿ ಸಿಹಿಹಂಚಿ ಸಂಭ್ರಮಾಚರಣೆ ಮಾಡಿದರು. ಈ ವೇಳೆ ಮಾದ್ಯಮಗಳೊಂದಿಗೆ ಮಾತನಾಡಿರುವ ಆಂಜನೇಯ, ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಈ ಮೂಲಕ ಬಿಜೆಪಿಗೆ ದಕ್ಷಿಣ ಭಾರತದಲ್ಲಿ ಬಾಗಿಲು ಬಂದ್ ಆಗಿದೆ ಎಂಬ ಸಂದೇಶ ರವಾಗಿಯಾಗಿದೆ ಎಂದು ಹೇಳಿದ್ದಾರೆ.

ನಾವು ತೆಲಂಗಾಣ ರಾಜ್ಯ ನಿರ್ಮಾಣಕ್ಕೆ ಶ್ರಮಿಸಿದ ಹಿನ್ನೆಲೆಯಲ್ಲಿ ಈ ಬಾರಿ ನಮ್ಮ ‘ಕೈ’ ಹಿಡಿದಿದ್ದಾರೆ. ಈ ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿಯನ್ನು ಬಿಟ್ಟಿ ಕಾರ್ಯಕ್ರಮ ಎಂದಿದ್ದರು. ಆದರೆ ಮದ್ಯಪ್ರದೇಶ ಹಾಗೂ ರಾಜಸ್ಥಾನದಲ್ಲಿ ಬಿಜೆಪಿ ಬಿಟ್ಟಿ ಕಾರ್ಯಕ್ರಮ ಕೊಟ್ಟಿದ್ದೇಕೆ ಎಂದು ಪ್ರಶ್ನಿಸಿದರು.

ಅಲ್ಲದೇ ಬಿಜೆಪಿಯವರು ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಅನುಸರಿಸಿದೆ. ನಾವು ಗ್ಯಾರಂಟಿ ಭಾಗ್ಯ ಘೋಷಿಸಿದಾಗ, ಉಚಿತ ಯೋಜನೆಯಿಂದ ರಾಜ್ಯ ದಿವಾಳಿ ಎಂದು ಬಿಜೆಪಿಗರು ಹೇಳಿದ್ದರು. ಆದರೆ ಈಗ ಉಚಿತ ಯೋಜನೆ ಘೋಷಿಸಿ ಬಿಜೆಪಿಯವರು ದ್ವಂದ್ವ ನೀತಿ ಅನುಸರಿಸಿದ್ದಾರೆ ಎಂದು ಕಾಲೆಳೆದರು.

ಹೆಚ್ಚಿನ ಸುದ್ದಿ