ಮುಂಬೈಯ ಐತಿಹಾಸಿಕ ವಾಂಖಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ T20 World Cup) ಪಂದ್ಯದಲ್ಲಿ ಭಾರತ ತಂಡ (Team India) ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ (USA) ವಿರುದ್ಧ 29 ರನ್ ಗಳ ಸುಲಭ ಜಯ ಸಾಧಿಸಿತು.
ಕೊಲಂಬೊ: ಇಂದಿನಿಂದ ಕ್ರಿಕೆಟ್ ಹಬ್ಬ ಟಿ20 ವಿಶ್ವಕಪ್ (T20 World Cup) ಆರಂಭವಾಗುತ್ತಿದ್ದು, ವಿವಾದಗಳಿಂದಲೇ ಸದ್ದು ಮಾಡಿದ 10ನೇ ಆವೃತ್ತಿಯ ಚುಟುಕು ಕ್ರಿಕೆಟ್ ಸಮರಕ್ಕೆ ಚಾಲನೆ ಸಿಗುತ್ತಿದೆ. ಭಾರತ (India) ಮತ್ತು ಪಾಕಿಸ್ತಾನದ (Pakistan) ನಡುವೆ ವಿವಾದದ ನಡುವೆಯೂ ಕ್ರಿಕೆಟ್ ಪಂದ್ಯಗಳು ಪ್ರಾರಂಭವಾಗುತ್ತಿದ್ದು, ಕ್ರಿಕೆಟ್ ಪ್ರೇಮಿಗಳ ಕುತೂಹಲ ಕೆರಳಿಸಿದೆ.
ಮಹಿಳೆಯರ ಪ್ರೀಮಿಯರ್ ಲೀಗ್ (WPL) ಸೀಸನ್ 4 ರ ಫೈನಲ್ ಪಂದ್ಯದಲ್ಲಿ ಆರ್ ಸಿಬಿ (RCB) ತಂಡವು 6 ವಿಕೆಟ್ ಗಳ ಭರ್ಜರಿ ಜಯ ಗಳಿಸುವ ಮೂಲಕ ಎರಡನೇ ಬಾರಿಗೆ ಡಬ್ಲ್ಯೂ ಪಿಲ್ ಟ್ರೋಫಿಗೆ ಮುತ್ತಿಕ್ಕಿದೆ. ಇದೀಗ ಸಿಎಂ ಸಿದ್ದರಾಮಯ್ಯ (Cm Siddaramaiah) ಶುಭ ಕೋರಿದ್ದಾರೆ.
ಮಹಿಳೆಯರ ಪ್ರೀಮಿಯರ್ ಲೀಗ್ (WPL) ಸೀಸನ್ 4 ರ ಫೈನಲ್ ಪಂದ್ಯದಲ್ಲಿ ಆರ್ ಸಿಬಿ (RCB) ತಂಡವು 6 ವಿಕೆಟ್ ಗಳ ಭರ್ಜರಿ ಜಯ ಗಳಿಸುವ ಮೂಲಕ ಎರಡನೇ ಬಾರಿಗೆ ಡಬ್ಲ್ಯೂ ಪಿಲ್ ಟ್ರೋಫಿಗೆ ಮುತ್ತಿಕ್ಕಿದೆ.
ಕ್ರಿಕೆಟ್ (Cricket )ಆಡಳಿತ ಮಂಡಳಿಗಳಲ್ಲಿ ಮಾಜಿ ಆಟಗಾರರು (Cricket players) ಚುಕ್ಕಾಣಿ ಹಿಡಿಯಬೇಕು ಬ್ಯಾಟ್ ಹಿಡಿಯಲು ಬಾರದವರೆಲ್ಲಾ ಕ್ರಿಕೆಟ್ ಆಡಳಿತ ಮಾಡಬಾರದು ಎಂದು ಸುಪ್ರೀಂ ಕೋರ್ಟ್ (Supreme court ) ಆದೇಶಿಸಿದೆ
ಅಂತರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಭಾರತೀಯ ರಾಜಕೀಯ ಹಿತಾಸಕ್ತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನ (Pakistan), ಕ್ರಿಕೆಟ್ ಆಡಳಿತದಲ್ಲಿ ಸಮತೋಲನ ಮತ್ತು ಪಾರದರ್ಶಕತೆ ಕಳೆದುಹೋಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಹೊಸ ಜಾಗತಿಕ ಕ್ರಿಕೆಟ್ ಸಂಸ್ಥೆಯನ್ನು ಸ್ಥಾಪಿಸುವ ಅಗತ್ಯವಿದೆ ಎಂದು ಪಾಕಿಸ್ತಾನ ಆಗ್ರಹಿಸಿದೆ
ಇಂಡಿಯನ್ ಪ್ರೀಮಿಯರ್ ಲೀಗ್ (IPL)ನ ಜನಪ್ರಿಯ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಾರಾಟ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಿದೆ. ಮೂಲಗಳ ಪ್ರಕಾರ, ಪ್ರಾಂಚೈಸಿಯ ಒಟ್ಟು ಮೌಲ್ಯ ₹18,000 ಕೋಟಿಗೂ ಮೀರಲಿದೆ ಎಂಬ ಅಂದಾಜು ವ್ಯಕ್ತವಾಗಿದೆ.
ನವದೆಹಲಿ: ಭಾರತದೊಂದಿಗೆ (India) ಎದುರಾಳಿಯಾಗಿ ಐಸಿಸಿ (ICC) ಟೂರ್ನಿಗಳಲ್ಲಿ ಭಾಗವಹಿಸಲು ಪಾಕಿಸ್ತಾನ (Pakistan) ನಿರಾಕರಿಸಿದೆ. ಬದ್ಧ ವೈರಿಗಳ ಪಂದ್ಯ ನಡೆಯದೇ ಹೋದಲ್ಲಿ ಭಾಗೀದಾರರಿಗೆ ಸಾವಿರಾರು ಕೋಟಿ ರೂ. ನಷ್ಟವಾಗಲಿದೆ.
ಅಂಡರ್–19 ಕ್ರಿಕೆಟ್ ವಿಶ್ವಕಪ್ನಲ್ಲಿ (U19 World Cup) ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ (Ind vs pak) ತಂಡ 58 ರನ್ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಭಾರತ (team India) ಸತತ ಆರನೇ ಬಾರಿಗೆ ಸೆಮಿ ಫೈನಲ್ ಪ್ರವೇಶಿಸಿದೆ.
ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಬ್ಯುಸಿಯಾಗಿರುವ ಟೀಂ ಇಂಡಿಯಾವು (Team india) t20 ವಿಶ್ವಕಪ್ ಗೂ ಮುನ್ನ ಇಂದು ಕೇರಳದ (Kerala) ತಿರುವನಂತಪುರಂನಲ್ಲಿರುವ ಪ್ರಸಿದ್ಧ ಶ್ರೀ ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಭಾರತೀಯ ಒಲಿಂಪಿಕ್ ಅಸೋಸಿಯೇಷನ್ (ಐಒಎ) ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ (PT Usha) ಅವರ ಪತಿ ವೆಂಗಲಿಲ್ ಶ್ರೀನಿವಾಸನ್ (Vengalil Srinivasan) ಅವರು ಶುಕ್ರವಾರ ಮುಂಜಾನೆ ನಿಧನರಾಗಿದ್ದಾರೆ
ಟೀಂ ಇಂಡಿಯಾದ (Team India) ಮಾಜಿ ನಾಯಕ ಹಾಗೂ ವಿಶ್ವಪ್ರಸಿದ್ಧ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ (Instagram) ಖಾತೆಯನ್ನು ಹಠಾತ್ ನಿಷ್ಕ್ರಿಯಗೊಳಿಸುವ ಮೂಲಕ ಅಭಿಮಾನಿಗಳು ಮತ್ತು ಕ್ರಿಕೆಟ್ ವಲಯವನ್ನು ಅಚ್ಚರಿಗೊಳಿಸಿದ್ದಾರೆ.
ಭದ್ರತಾ ಕಾಳಜಿಯನ್ನು ಉಲ್ಲೇಖಿಸಿ, ಬಾಂಗ್ಲಾದೇಶ ಸರ್ಕಾರವು ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕೆಂದು ವಿನಂತಿಸಿತ್ತು, ಆದರೆ ಐಸಿಸಿ ಆ ವಿನಂತಿಯನ್ನು ತಿರಸ್ಕರಿಸಿತು. ಇದರಿಂದ ಮತ್ತಷ್ಟು ಕೆರಳಿದ್ದ ಬಾಂಗ್ಲಾ ಸರ್ಕಾರ ತನ್ನ ತಂಡವನ್ನು ಭಾರತಕ್ಕೆ ಕಳುಹಿಸಲು ಒಪ್ಪದೆ ಟೂರ್ನಿಯಿಂದ ಹಿಂದೆ ಸರಿಯಿತು. ಆದರೆ ಅದೇ ಬಾಂಗ್ಲಾದೇಶ ಸರ್ಕಾರ ಇದೀಗ ತನ್ನ ತಂಡವನ್ನು ಭಾರತಕ್ಕೆ ಕಳುಹಿಸಲು ಅನುಮತಿ ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ.
ಭಾರತ ಮತ್ತು ಶ್ರೀಲಂಕಾ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್(T20 World cup ) 2026 ರಲ್ಲಿ ಒಟ್ಟು 20 ತಂಡಗಳು ಕಣಕ್ಕಿಳಿಯಲಿವೆ. ಇದೇ ಟೂರ್ನಮೆಂಟ್ ನಿಂದ ಪಾಕಿಸ್ತಾನ (Pakistan ) ಹೊರಗುಳಿಯುವ ಬೆದರಿಕೆವೊಡ್ಡಿದೆ
2026ರ ಟಿ20 ವಿಶ್ವಕಪ್ನ್ನು (T20 World Cup) ಪಾಕಿಸ್ತಾನ (Pakistan) ಬಹಿಷ್ಕರಿಸುವ ಸಾಧ್ಯತೆ ಕ್ರಿಕೆಟ್ ಜಗತ್ತಿನಲ್ಲಿ ಚರ್ಚೆಗೆ ಕಾರಣವಾಗಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಈ ಕುರಿತು ಗಂಭೀರವಾಗಿ ಯೋಚಿಸುತ್ತಿದ್ದು, ಅಂತಿಮ ತೀರ್ಮಾನ ಇನ್ನೂ ಪ್ರಕಟವಾಗಿಲ್ಲ.
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಪಾಕಿಸ್ತಾನವನ್ನು (Pakistan) ಟಿ20 ವಿಶ್ವಕಪ್ 2026 (World cup) ನಿಂದ ಹಿಂಪಡೆಯಲು ಯತ್ನಿಸಿದರೆ, ಅವರ ವಿರುದ್ಧ ಗಂಭೀರ ಶಿಕ್ಷೆ ಮತ್ತು ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.
ಮಹಿಳೆಯರ ಪ್ರೀಮಿಯರ್ ಲೀಗ್ (WPL) ಸೀಸನ್ 4 ರಲ್ಲಿ ಆರ್ ಸಿಬಿ (RCB) ತಂಡವು ಡೆಲ್ಲಿ (Delhi Capitals) ವಿರುದ್ಧ 7 ವಿಕೆಟ್ ಗಳ ಸೋಲನ್ನು ಅನುಭವಿಸಿದ್ದು, ಈ ಮೂಲಕ ಆರ್ ಸಿಬಿ ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ.
ಕೋವಿಶೀಲ್ಡ್ ಲಸಿಕೆ ತಯಾರಿಸಿದ್ದ ಸಂಸ್ಥೆ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ (Serum institute of india) ಸಿಇಒ ಆದರ್ ಪೂನಾವಾಲಾ (Adar Poonawala) ಆರ್ಸಿಬಿ (RCB) ಕ್ರಿಕೆಟ್ ಟೀಂ ಖರೀದಿಸುವ ಸಾಧ್ಯತೆ ಇದೆ
ದೇಶ ಅಂದ್ರೆ ಹೇಗಿರಬೇಕು ಅನ್ನೋದಕ್ಕೆ ಸಾಲು ಸಾಲು ಸಾಕ್ಷಿಗಳು ಸಿಗುತ್ತವೆ. ಆದ್ರೆ, ದೇಶ ಹೇಗಿರಬಾರದು ಅಂತ ನೋಡಿದ್ರೆ ಮೊದಲು ಕಾಣಿಸೋದೇ ಪಾಕಿಸ್ತಾನ (Pakistan). ಕ್ರಿಕೆಟ್ (Cricket) ಅಂಗಳದಲ್ಲೂ ಕೂಡಾ ಪಾಕಿಸ್ತಾನ ಕಿರಿಕ್ ಮಾಡುತ್ತಲೇ ಬರ್ತಿದೆ. ಇದೀಗ ಮತ್ತದೇ ಕ್ಯಾತೆ ತೆಗೆದಿದೆ.
ರಾಜ್ಯ ಸರ್ಕಾರದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಅಭಿಮಾನಿಗಳಿಗೆ ಹಸಿರು ನಿಶಾನೆ ದೊರೆತ ಬೆನ್ನಲ್ಲೇ, ಎಂ. ಚಿನ್ನಸ್ವಾಮಿ ಕ್ರೀಡಾಂಗಣದ (M. Chinnaswamy Stadium) ನವೀಕರಣ ಕಾಮಗಾರಿಯನ್ನು ತ್ವರಿತಗೊಳಿಸಲಾಗಿದೆ, ಮತ್ತು ಇದೇ ಮೈದಾನದಲ್ಲಿ ಐಪಿಎಲ್ (IPL) ಉದ್ಘಾಟನಾ ಪಂದ್ಯ ನಡೆಯುವ ಸಾಧ್ಯತೆ ಇದೆ.
ಭಾರತದ ಯುವ ಕ್ರಿಕೆಟ್ ಪ್ರತಿಭೆ ವೈಭವ್ ಸೂರ್ಯವಂಶಿ (Vaibhav Suryavanshi) U-19 ವಿಶ್ವಕಪ್ನಲ್ಲಿ (World cup) ಸ್ಫೋಟಕ ಪ್ರದರ್ಶನ ನೀಡುವ ಮೂಲಕ ವಿಶ್ವದಾಖಲೆ ಬರೆದಿದ್ದು, ವಿರಾಟ್ ಕೊಹ್ಲಿಯವರ (Virat Kohli) ಹಳೆಯ ದಾಖಲೆ ಪತನಗೊಂಡಿದೆ.
ಮಹಿಳೆಯರ ಪ್ರೀಮಿಯರ್ ಲೀಗ್ (WPL) ಸೀಸನ್ 4 ರಲ್ಲಿ ಆರ್ ಸಿಬಿ (RCB) ತಂಡವು ಅತ್ಯದ್ಭುತ ಪ್ರದರ್ಶನ ನೀಡುತ್ತಿದ್ದು, ಗೆಲುವಿನ ಓಟ ಮುಂದುವರೆದಿದೆ. ಇದೀಗ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.
ಐಪಿಎಲ್ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲು ಅವಕಾಶ ಕಲ್ಪಿಸಲಾಗಿದೆ. KSCAಗೆ ಷರತ್ತುಬದ್ಧ ಅವಕಾಶವನ್ನು ಗೃಹ ಇಲಾಖೆ ನೀಡಿದೆ. ಈ ಮೂಲಕ ಟಿ20 ವಿಶ್ವಕಪ್, ಐಪಿಎಲ್ ಆಯೋಜನೆ ಖಚಿತವಾಗಿದೆ.
ಕಳೆದ ವರ್ಷ ಜೂನ್ 4 ಆರ್ಸಿಬಿ (RCB) ಅಭಿಮಾನಿಗಳಿಗೆ ಅತ್ಯಂತ ದುಃಖದ ದಿನವಾಗಿತ್ತು. ಟ್ರೋಫಿ ಗೆದ್ದ ಖುಷಿ ಕೆಲವೇ ಕ್ಷಣಗಳಲ್ಲಿ ಮಾಯವಾಗಿತ್ತು. ಚಿನ್ನಸ್ವಾಮಿ ಸ್ಟೇಡಿಯಂನ (Chinnaswamy Stadium) ಅವ್ಯವಸ್ಥೆ, ಪೊಲೀಸರ ನಿರ್ಲಕ್ಷ್ಯ ಮತ್ತು ಆಡಳಿತದ ಬೇಜವಾಬ್ದಾರಿಯಿಂದ 11 ಮಂದಿ ಸಾವನ್ನಪ್ಪಿದ್ದರು.
ಮಹಿಳೆಯರ ಪ್ರೀಮಿಯರ್ ಲೀಗ್ (WPL) ಸೀಸನ್ 4 ಅದ್ಬುತ ಆರಂಭ ಪಡೆದಿರುವ ಹಾಲಿ ಚಾಂಪಿಯನ್ ಆರ್ ಸಿಬಿ (RCB) ತನ್ನ ಗೆಲುವಿನ ಓಟ ಮುಂದುವರೆಸಿದ್ದು, ಯುಪಿ ವಾರಿಯರ್ಸ್ (UP Warriors) ವಿರುದ್ಧ 9 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.
ಜಮ್ಮು ಮತ್ತು ಕಾಶ್ಮೀರದ(Jammu and Kashmir) ನೌಶೇರಾ ಸೆಕ್ಟರ್ನಲ್ಲಿ ನಿಯಂತ್ರಣ ರೇಖೆಯ ಬಳಿ ಭಾನುವಾರ ಸಂಜೆ ಪಾಕಿಸ್ತಾನದ(Pakistani) ಡ್ರೋನ್ಗಳ ಹಾರಾಟವನ್ನು ಪತ್ತೆ ಮಾಡಲಾಗಿದೆ
ಮಹಿಳೆಯರ ಪ್ರೀಮಿಯರ್ ಲೀಗ್ (WPL) ಸೀಸನ್ 4 ಅದ್ಬುತ ಆರಂಭ ಪಡೆದಿದ್ದು, ಮೊದಲ ಪಂದ್ಯದಲ್ಲೇ ಆರ್ ಸಿಬಿ (Rcb) ತಂಡ ಮುಂಬೈ (Mumbai Indians) ವಿರುದ್ಧ ರೋಚಕ ಗೆಲುವಿನ ಮೂಲಕ ಶುಭಾರಂಭ ಮಾಡಿದೆ.
2026ರ ಟಿ20 ವಿಶ್ವಕಪ್ (T20 world cup ) ಪಂದ್ಯಗಳನ್ನು ಭಾರತದಿಂದ ಶ್ರೀಲಂಕಾಗೆ ಸ್ಥಳಾಂತರಿಸುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಕರೆಯನ್ನು ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ನಿರಾಕರಿಸಿದೆ