ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಮಾಹಿತಿ ಹಕ್ಕು ಕಾಯ್ದೆಯ (RTI) ಅಡಿಯಲ್ಲಿ ಸಾರ್ವಜನಿಕ ಪ್ರಾಧಿಕಾರ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಮಾಹಿತಿ ಆಯೋಗ (CIC) ಮಹತ್ವದ ತೀರ್ಪು ನೀಡಿದೆ.
ಐಪಿಎಲ್ 2026 (IPL) ರ ಲೀಗ್ ಹಂತ ಮುಕ್ತಾಯಗೊಳ್ಳಲು ಇನ್ನು ಕೇವಲ ಎರಡು ಪಂದ್ಯಗಳು ಮಾತ್ರ ಬಾಕಿ ಇವೆ. ಆದರೆ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡದ ಅಭಿಮಾನಿಗಳ ನೆಚ್ಚಿನ 'ಥಲಾ' ಎಂ.ಎಸ್. ಧೋನಿ (MS Dhoni) ಈ ಸೀಸನ್ನಲ್ಲಿ ಇನ್ನು ಒಂದೂ ಪಂದ್ಯವನ್ನು ಆಡಿಲ್ಲ.
ಐಪಿಎಲ್ 2026ರ (IPL 2026) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಭರ್ಜರಿಯಾಗಿ ಮುನ್ನುಗ್ಗುತ್ತಿದ್ದು, ಈ ಬಾರಿಯ ಪ್ಲೇಆಫ್ ಹಂತಕ್ಕೆ ಅಧಿಕೃತವಾಗಿ ಅರ್ಹತೆ ಪಡೆದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ತಂಡದ ಈ ಯಶಸ್ಸಿಗೆ ಆರ್ಸಿಬಿ ತಂಡದ ಮಾಜಿ ಮಾಲೀಕ ವಿಜಯ್ ಮಲ್ಯ (Vijay Mallya) ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮ್ಮ ಸಂತೋಷವನ್ನು ಹಂಚಿಕೊಂಡಿದ್ದಾರೆ.
ಐಪಿಎಲ್ 2026ರಲ್ಲಿ(IPL-2026) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ರನ್ ಮಷಿನ್ ವಿರಾಟ್ ಕೊಹ್ಲಿ (Virat Kohli) ತಮ್ಮ ಬ್ಯಾಟಿಂಗ್ ಅಬ್ಬರವನ್ನು ಮುಂದುವರಿಸಿದ್ದಾರೆ. ಪಂಜಾಬ್ ಕಿಂಗ್ಸ್ (PBKS) ವಿರುದ್ಧ ನಡೆದ ಮಹತ್ವದ ಪಂದ್ಯದಲ್ಲಿ ಮತ್ತೊಮ್ಮೆ ಭರ್ಜರಿ ಅರ್ಧಶತಕ ಸಿಡಿಸಿದ ಕೊಹ್ಲಿ, ಕ್ರಿಕೆಟ್ ಲೋಕದಲ್ಲಿ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುವ ಮೂಲಕ ಎರಡೆರಡು ಐತಿಹಾಸಿಕ ದಾಖಲೆಗಳನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.
ಐಪಿಎಲ್ (IPL) ಕ್ರಿಕೆಟ್ ಅಭಿಮಾನಿಗಳ ಜೇಬಿಗೆ ಸನ್ರೈಸರ್ಸ್ ಹೈದರಾಬಾದ್ (SRH) ಮ್ಯಾನೇಜ್ಮೆಂಟ್ ಭಾರಿ ಕತ್ತರಿ ಹಾಕಿದೆ. ಮೇ 22ರಂದು ಹೈದರಾಬಾದ್ನ (Hyderabad) ಉಪ್ಪಲ್ ಕ್ರೀಡಾಂಗಣದಲ್ಲಿ (Uppal Stadium) ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧದ ಹೈವೋಲ್ಟೇಜ್ ಪಂದ್ಯದ ಟಿಕೆಟ್ ದರವನ್ನು (Ticket Price) ಶೇಕಡಾ 50 ರಿಂದ 110ರಷ್ಟು ಹೆಚ್ಚಳ ಮಾಡಲಾಗಿದ್ದು, ಇದು ಮಧ್ಯಮ ವರ್ಗದ ಕ್ರಿಕೆಟ್ ಪ್ರೇಮಿಗಳ ತೀವ್ರ ನಿರಾಸೆಗೆ ಕಾರಣವಾಗಿದೆ.
ಸಿಲಿಕಾನ್ ಸಿಟಿ (Bengaluru) ಕ್ರಿಕೆಟ್ ಪ್ರೇಮಿಗಳಿಗೆ ಹಾಗೂ ಆನೇಕಲ್ (Anekal) ಭಾಗದ ಜನತೆಗೆ ರಾಜ್ಯ ಸರ್ಕಾರವು ಭರ್ಜರಿ ಕೊಡುಗೆಯೊಂದನ್ನು ನೀಡಲು ಮುಂದಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಹೈಟೆಕ್ ಕ್ರಿಕೆಟ್ ಸ್ಟೇಡಿಯಂ (International Cricket Stadium) ಯೋಜನೆಗೆ ಕೊನೆಗೂ ಕಾಲಕೂಡಿ ಬಂದಿದ್ದು, ಮೇ 23 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಅಧಿಕೃತವಾಗಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮೇ 31 ರಂದು ಅಹಮದಾಬಾದ್ನ ನರೇಂದ್ರ ಮೋದಿ ಮೈದಾನದಲ್ಲಿ ಐಪಿಎಲ್ 2026 (IPL) ರ ಹೈವೋಲ್ಟೇಜ್ ಫೈನಲ್ ಪಂದ್ಯ ನಡೆಯಲಿದೆ. ವಿಶೇಷವೆಂದರೆ, ಅದೇ ದಿನ ಐಸಿಸಿಯ (ICC) ವಾರ್ಷಿಕ ಮಂಡಳಿ ಸಭೆಯೂ ಅಹಮದಾಬಾದ್ನಲ್ಲಿ ಆಯೋಜನೆಗೊಂಡಿದೆ. ಈ ಎರಡು ಪ್ರಮುಖ ಕಾರ್ಯಕ್ರಮಗಳಿಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ (Mohsin Naqvi) ಅವರಿಗೆ ಆಹ್ವಾನ ನೀಡಲಾಗಿದೆ ಎಂದು ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿದ್ದವು.
ಸಿಲ್ಲೆಟ್ ನಲ್ಲಿ ನಡೆಯುತ್ತಿರುವ ಬಾಂಗ್ಲಾದೇಶ (Bangladesh) ಮತ್ತು ಪಾಕಿಸ್ತಾನ (Pakistan) ನಡುವಿನ ಎರಡನೇ ಟೆಸ್ಟ್ (Test) ಪಂದ್ಯದ ಮೊದಲ ದಿನದ ಆಟದಲ್ಲಿ ಪಾಕಿಸ್ತಾನದ ವೇಗದ ಬೌಲರ್ ಹಸನ್ ಅಲಿ ಅವರ ತಲೆಗೆ ಬಲವಾದ ಹೊಡೆತ ಬಿದ್ದು, ಸ್ಟ್ರೆಚರ್ನಲ್ಲಿ ಮೈದಾನದಿಂದ ಹೊರಗೆ ಕರೆದೊಯ್ದ ಘಟನೆ ನಡೆದಿದೆ.
ಭಾರತದ ಹೆಮ್ಮೆಯ ಬ್ಯಾಡ್ಮಿಂಟನ್ ತಾರೆ ಹಾಗೂ ಖ್ಯಾತ ತರಬೇತುದಾರರಾದ ಜ್ವಾಲಾ ಗುಟ್ಟಾ (Jwala Gutta) ಅವರು ಕೇವಲ ಕ್ರೀಡಾಂಗಣದಲ್ಲಿ ಮಾತ್ರವಲ್ಲದೆ, ನಿಜ ಜೀವನದಲ್ಲೂ ಹತ್ತಾರು ಕಂದಮ್ಮಗಳ ಪಾಲಿಗೆ ಆಪದ್ಬಾಂಧವರಾಗಿ ಹೊರಹೊಮ್ಮಿದ್ದಾರೆ.
ಐಪಿಎಲ್ (IPL) 2026ರ ಸೀಸನ್ ಅಂತಿಮ ಹಂತಕ್ಕೆ ತಲುಪುತ್ತಿದ್ದರೂ, ಇದುವರೆಗೆ ಕಣಕ್ಕಿಳಿಯದ ಮಹೇಂದ್ರ ಸಿಂಗ್ ಧೋನಿ (Mahendra Singh Dhoni) ಅವರ ಆಟವನ್ನು ನೋಡಲು ಕಾತರದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಒಂದು ಸಮಾಧಾನಕರ ಸುದ್ದಿ ಸಿಕ್ಕಿದೆ. ಗಾಯದ ಸಮಸ್ಯೆಯಿಂದಾಗಿ ಈ ಆವೃತ್ತಿಯ ಮೊದಲ 11 ಪಂದ್ಯಗಳಿಂದ ಹೊರಗುಳಿದಿದ್ದ ಧೋನಿ, ಈಗ ಲಕ್ನೋ ಸೂಪರ್ ಜೈಂಟ್ಸ್ (lucknow super giants )ವಿರುದ್ಧದ ಪಂದ್ಯಕ್ಕಾಗಿ ತಂಡದೊಂದಿಗೆ ಪ್ರಯಾಣ ಬೆಳೆಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದ ಈ ಪೊಲೀಸ್ ಅಧಿಕಾರಿಯನ್ನು ಅನ್ಶುಲ್ ಕಾಂಬೋಜ್ (Anshul Kamboj ) ಅವರು (IPL) ಅಂತಿಮವಾಗಿ ಭೇಟಿ ಮಾಡಿದ್ದು, ಇಬ್ಬರೂ ಒಟ್ಟಿಗೆ ನಗು ಹಂಚಿಕೊಂಡಿರುವ ವಿಡಿಯೋ ಈಗ ಅಭಿಮಾನಿಗಳ ಮನಗೆದ್ದಿದೆ.
ಮುಂಬೈ ಇಂಡಿಯನ್ಸ್ (Mumbai Indians) ವಿರುದ್ಧ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಅಶಿಸ್ತು ಪ್ರದರ್ಶಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಫೋಟಕ ಬ್ಯಾಟರ್ ಟಿಮ್ ಡೇವಿಡ್ (Tim David) ಅವರಿಗೆ ಐಪಿಎಲ್ (IPL) ಆಡಳಿತ ಮಂಡಳಿ ಬಿಸಿ ಮುಟ್ಟಿಸಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಪಂದ್ಯಾವಳಿಯ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರಿಗೆ ಪಂದ್ಯದ ಶುಲ್ಕದ ಶೇಕಡಾ 15 ರಷ್ಟು ದಂಡ ವಿಧಿಸಲಾಗಿದೆ. ಮುಂಬೈ ಇಂಡಿಯನ್ಸ್ (MI) ವಿರುದ್ಧದ ಪಂದ್ಯದ ವೇಳೆ ಅಂಪೈರ್ ತೀರ್ಪಿನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಅಸಭ್ಯ ಪದಗಳನ್ನು ಬಳಸಿದ ಕಾರಣಕ್ಕಾಗಿ ಐಪಿಎಲ್ ಆಡಳಿತ ಮಂಡಳಿ ಈ ಕ್ರಮ ಕೈಗೊಂಡಿದೆ.
ಮುಂಬೈ ಇಂಡಿಯನ್ಸ್ (Mumbai Indians) ವಿರುದ್ಧದ ಕೊನೆಯ ಎಸೆತದ ರಣರೋಚಕ ಗೆಲುವಿನ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಆದರೆ, ಅಭಿಮಾನಿಗಳ (Fans) ಕುತೂಹಲಕ್ಕೆ ಕಾರಣವಾಗಿರುವ ಅಂಶವೆಂದರೆ 14 ಅಂಕಗಳಿಸಿದರೂ ಆರ್ಸಿಬಿಗೆ ಪ್ಲೇ-ಆಫ್ ಸ್ಥಾನ ಇನ್ನೂ ಅಧಿಕೃತವಾಗಿ ಖಚಿತಗೊಂಡಿಲ್ಲ.
ಐಪಿಎಲ್ 2026ರ (IPL) ಅತ್ಯಂತ ರೋಚಕ ಪಂದ್ಯಕ್ಕೆ ರಾಯ್ ಪುರ್ ಕ್ರೀಡಾಂಗಣ ಸಾಕ್ಷಿಯಾಯಿತು. ಕಟ್ಟಕಡೆಯ ಎಸೆತದವರೆಗೂ ಕುತೂಹಲ ಕಾಯ್ದಿರಿಸಿದ್ದ ಈ ಹಣಾಹಣಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಮುಂಬೈ ಇಂಡಿಯನ್ಸ್ (MI) ವಿರುದ್ಧ 2 ವಿಕೆಟ್ಗಳ ರೋಚಕ ಗೆಲುವು ದಾಖಲಿಸಿದೆ.
ರಾಯ್ಪುರ: ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಅತ್ಯಂತ ಕುತೂಹಲಕಾರಿ ಪಂದ್ಯಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (Rcb) ಮತ್ತು ಮುಂಬೈ ಇಂಡಿಯನ್ಸ್ (Mi) ನಡುವಿನ ಸೆಣಸಾಟಕ್ಕೆ ಮಳೆ (Rain) ಭೀತಿ ಎದುರಾಗಿದೆ.
ಐಪಿಎಲ್ ಫೈನಲ್ ಪಂದ್ಯವನ್ನು(IPL final match) ಬೆಂಗಳೂರಿನಿಂದ ಅಹಮದಾಬಾದ್ಗೆ ಸ್ಥಳಾಂತರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್(D.K. Shivakumar) ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಐಪಿಎಲ್ 2026ರ (IPL 2026) ಫೈನಲ್ ಪಂದ್ಯವನ್ನು (Final Match ) ಬೆಂಗಳೂರಿನಿಂದ ಗುಜರಾತ್ನ ಅಹಮದಾಬಾದ್ಗೆ ಸ್ಥಳಾಂತರಿಸಿರುವ ಬಿಸಿಸಿಐ (BCCI) ನಿರ್ಧಾರಕ್ಕೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge )ತೀವ್ರ ಆಕ್ರೋಶ
ಟೀಂ ಇಂಡಿಯಾದ (Team India) ಸ್ಫೋಟಕ ಬ್ಯಾಟರ್ ಸೂರ್ಯಕುಮಾರ್ ಯಾದವ್ (Surya kumar Yadav) ಅವರ ಜೀವನಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಸೂರ್ಯಕುಮಾರ್ ಅವರ ಪತ್ನಿ ದೇವಿಶಾ ಶೆಟ್ಟಿಗೆ ಹೆಣ್ಣು ಮಗುವಿಗೆ (Baby Girl) ಜನ್ಮ ನೀಡಿದ್ದು, ಈ ಸುಸಂದರ್ಭವನ್ನು 'ಸ್ಕೈ' ದಂಪತಿ ಅತ್ಯಂತ ಸಡಗರದಿಂದ ಬರಮಾಡಿಕೊಂಡಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ಐಪಿಎಲ್ (IPL) 19 ನೇ ಆವೃತ್ತಿಯಲ್ಲಿ ಸ್ಟಾರ್ ಆಟಗಾರರು ಮತ್ತು ಅಧಿಕಾರಿಗಳನ್ನು ಹನಿಟ್ರ್ಯಾಪ್ (Honeytrap) ನಂತಹ ಗಂಭೀರ ಆರೋಪಗಳಲ್ಲಿ ಸಿಲುಕಿಸಲು ವ್ಯವಸ್ಥಿತ ಸಂಚು ನಡೆದಿದೆ ಎಂಬ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI), ಆಟಗಾರರ ರಕ್ಷಣೆಗಾಗಿ ಮತ್ತು ಲೀಗ್ನ ಘನತೆಯನ್ನು ಉಳಿಸಲು ಅತ್ಯಂತ ಕಠಿಣ ಕ್ರಮಗಳಿಗೆ ಮುಂದಾಗಿದೆ.
ಈ ಬಾರಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಐಪಿಎಲ್ (IPL) ಫೈನಲ್ ಪಂದ್ಯವು ಉಚಿತ ಟಿಕೆಟ್ಗಳ ಹಂಚಿಕೆ ವಿಚಾರದಲ್ಲಿ ಉಂಟಾದ ಗೊಂದಲದಿಂದಾಗಿ ಬೇರೆಡೆಗೆ ಸ್ಥಳಾಂತರಗೊಂಡಿದೆ.
ವಿರಾಟ್ ಕೊಹ್ಲಿ ಮತ್ತು ರವೀಂದ್ರ ಜಡೇಜಾ ಅವರ ಅಂಡರ್-19 ತಂಡದ ಮಾಜಿ ಸಹ ಆಟಗಾರ ಮತ್ತು ಪಂಜಾಬ್ನ(Punjab) ಮಾಜಿ ವೇಗದ ಬೌಲರ್ ಅಮನ್ಪ್ರೀತ್ ಸಿಂಗ್ ಗಿಲ್ (Amanpreet Singh Gill) ಅವರು 36ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ.
ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದ ಐಪಿಎಲ್ 2026ರ (IPL) ಪ್ಲೇ-ಆಫ್ಸ್ ವೇಳಾಪಟ್ಟಿಯನ್ನು ಬಿಸಿಸಿಐ (BCCI) ಬಿಡುಗಡೆ ಮಾಡಿದೆ. ಆದರೆ, ಬೆಂಗಳೂರಿನ (Bengaluru) ಕ್ರಿಕೆಟ್ ಪ್ರೇಮಿಗಳಿಗೆ ಭಾರಿ ನಿರಾಸೆಯಾಗಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ನಡೆಯಬೇಕಿದ್ದ ಫೈನಲ್ ಪಂದ್ಯವು ಈಗ ಅಹಮದಾಬಾದ್ಗೆ ಸ್ಥಳಾಂತರಗೊಂಡಿದೆ.
ಐಪಿಎಲ್ 2026ರ (IPL) ಹೈ-ವೋಲ್ಟೇಜ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ (Lsg) ವಿರುದ್ಧ ಮುಂಬೈ ಇಂಡಿಯನ್ಸ್ (Mumbai Indians) ಐತಿಹಾಸಿಕ ಜಯ ದಾಖಲಿಸಿದೆ. ಹ್ಯಾಮ್ಸ್ಟ್ರಿಂಗ್ ಗಾಯದ ಸಂಕಷ್ಟದಿಂದ ಮರಳಿದ ರೋಹಿತ್ ಶರ್ಮಾ (Rohit Sharma) ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಮುಂಬೈ ತಂಡ ಭರ್ಜರಿ ಗೆಲುವು ಸಾಧಿಸಿದ್ದು, ಈ ಸಂಭ್ರಮದ ನಡುವೆಯೇ ತಂಡದ ಮಾಲಕಿ ನೀತಾ ಅಂಬಾನಿ (Nita Ambani) ಅವರು ರೋಹಿತ್ಗೆ ಸರ್ಪ್ರೈಸ್ ಗಿಫ್ಟ್ ನೀಡಿದ್ದಾರೆ.
ಲಾಹೋರ್ನ ಗಡಾಫಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ್ ಸೂಪರ್ ಲೀಗ್ (PSL) 2026ರ ರೋಚಕ ಫೈನಲ್ ಪಂದ್ಯದಲ್ಲಿ ಬಾಬರ್ ಅಜಮ್ (Babar Azam) ನಾಯಕತ್ವದ ಪೆಶಾವರ್ ಝಲ್ಮಿ ತಂಡ ಭರ್ಜರಿ ಜಯ ಸಾಧಿಸಿ ಚಾಂಪಿಯನ್ ಪಟ್ಟಕ್ಕೇರಿದೆ.
ರಾಜಸ್ಥಾನ್ ರಾಯಲ್ಸ್ (Rajasthan Royals) ತಂಡದ ನಾಯಕ ರಿಯಾನ್ ಪರಾಗ್ (Riyan Parag) ತಮ್ಮ ಆಫ್-ಫೀಲ್ಡ್ ವಿವಾದಗಳ ಕುರಿತು ಹರಿದಾಡುತ್ತಿರುವ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.
ಭಾರತೀಯ ಕ್ರಿಕೆಟ್ (Team India) ತಂಡದ ಪ್ರಮುಖ ವೇಗಿ ಮೊಹಮ್ಮದ್ ಶಮಿ (mohammed Shami) ಅವರ ಸಹೋದರ ಮೊಹಮ್ಮದ್ ಕೈಫ್ ವಿರುದ್ಧ ಗಂಭೀರ (Shocking) ಆರೋಪವೊಂದು ಕೇಳಿಬಂದಿದೆ. ಮದುವೆಯಾಗುವುದಾಗಿ ನಂಬಿಸಿ ಈಗ ದ್ರೋಹ ಎಸಗಿದ್ದಾರೆ ಎಂದು ಯುವತಿಯೊಬ್ಬರು ದೂರಿದ್ದಾರೆ.
'ಜೆಂಟಲ್ಮನ್ ಗೇಮ್' ಎಂದೇ ಕರೆಯಲ್ಪಡುವ ಕ್ರಿಕೆಟ್(Cricket) ಲೋಕಕ್ಕೆ ದೊಡ್ಡ ಕಪ್ಪುಚುಕ್ಕೆ ಹತ್ತಿದೆ. ಹೋಟೆಲ್ ಬಾತ್ರೂಮ್ನಲ್ಲಿ ಮಹಿಳೆಯೊಬ್ಬರ ಖಾಸಗಿ ವಿಡಿಯೋ ಚಿತ್ರೀಕರಿಸಿದ ಗಂಭೀರ ಆರೋಪದ ಮೇಲೆ ಇಬ್ಬರು ಖ್ಯಾತ ಅಂತರಾಷ್ಟ್ರೀಯ ಕ್ರಿಕೆಟಿಗರನ್ನು ಲಂಡನ್ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂಡಿಯನ್ ಪ್ರೀಮಿಯರ್ ಲೀಗ್ (IPL) ಪಂದ್ಯದ ವೇಳೆ ಶಿಸ್ತು ಉಲ್ಲಂಘಿಸಿದ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಅವರಿಗೆ ಐಪಿಎಲ್ ಆಡಳಿತ ಮಂಡಳಿಯು ಭಾರಿ ಪ್ರಮಾಣದ ದಂಡ ವಿಧಿಸಿದೆ.
ಟೀಮ್ ಇಂಡಿಯಾದ ಮಾಜಿ ಸ್ಫೋಟಕ ಬ್ಯಾಟರ್ ವಿನೋದ್ ಕಾಂಬ್ಳಿ (Vinod Kambli) ಅವರ ಆರೋಗ್ಯದ ಬಗ್ಗೆ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿದ್ದ ಆತಂಕಕಾರಿ ಸುದ್ದಿಗಳ ನಡುವೆ, ಅವರ ಅಭಿಮಾನಿಗಳಿಗೆ ಸಮಾಧಾನಕರ ಸುದ್ದಿಯೊಂದು ಲಭಿಸಿದೆ.
ಮುಂಬೈ ಇಂಡಿಯನ್ಸ್ ಆಟಗಾರರು ಕಪ್ಪು ಪಟ್ಟಿ (Black Armbands) ಧರಿಸಿ ಕಣಕ್ಕಿಳಿದಿದ್ದಾರೆ. ಈ ರೀತಿ ಕಪ್ಪು ಬಟ್ಟೆ ಧರಿಸಿರುವುದು (IPL 2026) ಕುತೂಹಲಕ್ಕೆ ಕಾರಣವಾಗಿದ್ದು, ಅದರ ಕಾರಣ ಇಲ್ಲಿದೆ.
ಒಲಿಂಪಿಕ್ ಪದಕ ವಿಜೇತೆ ಮನು ಭಾಕರ್ (Manu Bhakar) ಅವರ ಬಳಿ ಇತ್ತೀಚಿನ ಕ್ರಿಕೆಟ್ ಸೆನ್ಸೇಷನ್ ವೈಭವ್ ಸೂರ್ಯವಂಶಿ (Vaibhav Sooryavanshi ) ಬಗ್ಗೆ ಪ್ರಶ್ನೆ ಕೇಳಿರುವುದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ (social media)ಭಾರಿ ಚರ್ಚೆ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ನಡೆದ ರಾಷ್ಟ್ರೀಯ ರೈಫಲ್ ಅಸೋಸಿಯೇಷನ್ ಆಫ್ ಇಂಡಿಯಾ (NRAI) ಕಾರ್ಯಕ್ರಮದಲ್ಲಿ ನಡೆದ ಈ ಘಟನೆ, ಭಾರತದಲ್ಲಿ ಕ್ರಿಕೆಟ್ ಮತ್ತು ಇತರ ಕ್ರೀಡೆಗಳ ನಡುವಿನ ತಾರತಮ್ಯವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.
ಐಪಿಎಲ್ (IPL) ಅಂಗಳದಲ್ಲಿ ಅತಿ ಕಿರಿಯ ವಯಸ್ಸಿಗೆ ಶತಕ ಸಿಡಿಸಿ ಕ್ರಿಕೆಟ್ ಲೋಕದ ಗಮನ ಸೆಳೆದಿರುವ 15 ವರ್ಷದ ಪೋರ ವೈಭವ್ ಸೂರ್ಯವಂಶಿ (Vaibhav Suryavanshi), ಈಗ ಮೈದಾನದ ಹೊರಗಿನ ತಮ್ಮ ಒಂದು ನಡೆಯ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ (Viral video) ಸುದ್ದಿಯಾಗಿದ್ದಾರೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ (Virat kohli) ಐಪಿಎಲ್ (IPL) ಇತಿಹಾಸದಲ್ಲಿ ಮತ್ತೊಂದು ಅಚ್ಚಳಿಯದ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಇಂದು ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಕೊಹ್ಲಿ ಕೇವಲ 11 ರನ್ (Run) ಗಳಿಸಿದರೆ, ಐಪಿಎಲ್ನಲ್ಲಿ 9,000 ರನ್ ಪೂರೈಸಿದ ವಿಶ್ವದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.