ಬೆಂಗಳೂರು : ರಾಜ್ಯವನ್ನು ಲೂಟಿ ಮಾಡಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ರಾಜ್ಯದಲ್ಲಿ ಹಣದುಬ್ಬರವಾಗುತ್ತಿದೆ ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ವಾಗ್ದಾಳಿ ನಡೆಸಿದ್ದಾರೆ.
ನಗರದ ಮಲ್ಲೇಶ್ವರದ ಪಕ್ಷದ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ, ರಾಜ್ಯ ಸರ್ಕಾರವು ತೈಲದ ಮೇಲೆ ಸೇಲ್ಸ್ ಟ್ಯಾಕ್ಸ್ ಏರಿಕೆ ಮಾಡಿದ್ದನ್ನು ಬಿಜೆಪಿ ಖಂಡಿಸುತ್ತದೆ ಎಂದು ಹೇಳಿದ್ದಾರೆ. ಸರ್ಕಾರದ ಈ ಧೋರಣೆ ವಿರುದ್ಧ ಬಿಜೆಪಿವತಿಯಿಂದ ಸೋಮವಾರದಂದು ಪ್ರತಿಭಟನೆ ಮಾಡಲಾಗುವುದು ಎಂದಿದ್ದಾರೆ.
ಕರ್ನಾಟಕದಲ್ಲಿ ಬೆಲೆ ಏರಿಕೆಯ ಗ್ಯಾರಂಟಿ ಯೋಜನೆ ಜಾರಿಗೆ ತಂದಿರುವ ಕಾಂಗ್ರೆಸ್ ಸರ್ಕಾರ ನಿನ್ನೆ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಮಾಡಿರುವುದನ್ನು ಖಂಡಿಸಿ, ರಾಜ್ಯ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಳ್ಳಲಾದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದೆ.
ರಾಜ್ಯವನ್ನು ಲೂಟಿ ಮಾಡಿರುವ ಕಾಂಗ್ರೆಸ್ ಸರ್ಕಾರದ ದುರಾಡಳಿತದಿಂದಾಗಿ ರಾಜ್ಯದಲ್ಲಿ… pic.twitter.com/QMt1otV2C4
— Dr. C.N. Ashwath Narayan (@drashwathcn) June 16, 2024
ಬಿಜೆಪಿ ಅವಧಿಯಲ್ಲಿ ವಿದೇಶಿ ಬಂಡವಾಳ ಹೂಡಿಕೆದಾರರ ನೆಚ್ಚಿನ ತಾಣವಾಗಿದ್ದ ಕರ್ನಾಟಕ ಇಂದು ಬಂಡವಾಳ ಹೂಡಿಕೆದಾರರನ್ನು ಆಕರ್ಷಸುವಲ್ಲಿ ವಿಫಲವಾಗುತ್ತಿದೆ. ಈಗಾಗಲೇ ಅಗತ್ಯ ವಸ್ತುಗಳು, ವಿದ್ಯುತ್, ಬಸ್ ಪ್ರಯಾಣದ ದರ ಏರಿಕೆಯ ಹೊರೆಯನ್ನು ಜನ ಸಾಮಾನ್ಯರ ಮೇಲೆ ಸರ್ಕಾರ ಹೇರಿದೆ. ಇದೀಗ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದಾಗಿ ಸರಕು ಸಾಗಣೆಯ ದರ ಹೆಚ್ಚಲಿದೆ. ಆಟೋ, ಲಾರಿ ಚಾಲಕರು ಸಗಟು ವ್ಯಾಪಾರಿಗಳಿಗೆ ಇದರ ಹೊರೆ ಬೀಳುವುದು ಖಚಿತವಾಗಿದೆ. ಕೂಡಲೇ ಈ ಬೆಲೆ ಏರಿಕೆ ನಿರ್ಧಾರವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.