Thursday, July 10, 2025
Homeರಾಜ್ಯಬಿಜೆಪಿ ಶಾಸಕ ಓಲೆಕಾರ್‌ ವಿರುದ್ಧದ ದೋಷಿ ಆದೇಶಕ್ಕೆ ಹೈಕೋರ್ಟ್‌ ತಡೆ

ಬಿಜೆಪಿ ಶಾಸಕ ಓಲೆಕಾರ್‌ ವಿರುದ್ಧದ ದೋಷಿ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಕರ್ನಾಟಕದಲ್ಲಿ ನಕಲಿ ಬಿಲ್ ಪ್ರಕರಣದಲ್ಲಿ ದೋಷಿಯಾಗಿ ಎರಡು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿರುವ ಹಾವೇರಿ ಕ್ಷೇತ್ರದ ಬಿಜೆಪಿ ಶಾಸಕ ನೆಹರು ಸಿ. ಓಲೇಕಾರ್​ಗೆ ಬಿಗ್ ರಿಲೀಫ್​ ಸಿಕ್ಕಿದ್ದು, ಓಲೆಕಾರ್‌ ದೋಷಿ ಎಂದು ತೀರ್ಮಾನಿಸಿದ್ದ ವಿಚಾರಣಾಧೀನ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಎರಡು ವರ್ಷಗಳ ಶಿಕ್ಷೆ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಓಲೆಕಾರ್‌ ಅವರನ್ನು ಸಲ್ಲಿಸಿದ್ದ ಮಧ್ಯಂತರ ವಿಚಾರಣೆ ನಡೆಸಿ, ಮಾರ್ಚ್‌ 31ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಕೆ. ನಟರಾಜನ್‌ ನೇತೃತ್ವದ ಏಕಸದಸ್ಯ ಪೀಠವು ಇಂದು ಪ್ರಕಟಿಸಿತು. ಕೆಲ ದಿನಗಳ ಹಿಂದಷ್ಟೇ ಇದೇ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ವಿಧಿಸಿದ್ದ ಎರಡು ವರ್ಷ ಶಿಕ್ಷೆಯನ್ನು ಹೈಕೋರ್ಟ್‌ ಅಮಾನತ್ತಿನಲ್ಲಿರಿಸಿತ್ತು. ದೋಷಿ ಮತ್ತು ಶಿಕ್ಷೆ ಆದೇಶಗಳೆರಡಕ್ಕೂ ತಡೆಯಾಗಿರುವುದರಿಂದ ಓಲೆಕಾರ್‌ ಹಾಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹಾದಿ ಸುಗಮವಾಗಿದೆ.

ಹಾವೇರಿ ನಗರಸಭೆ ಕಾಮಗಾರಿಯಲ್ಲಿ ನಕಲಿ ಬಿಲ್ ಸೃಷ್ಟಿಸಿ, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಕೋಟ್ಯಂತರ ಹಣ ನಷ್ಟ ಉಂಟುಮಾಡಿದ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಓಲೆಕಾರ್‌, ಅವರ ಇಬ್ಬರು ಪುತ್ರರು ಮತ್ತು ಅಧಿಕಾರಿಗಳನ್ನು ದೋಷಿಗಳು ಎಂದು ಪರಿಗಣಿಸಿ ತಲಾ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು.

ಹೆಚ್ಚಿನ ಸುದ್ದಿ

While viewing the website, tap in the menu bar. Scroll down the list of options, then tap Add to Home Screen.
Use Safari for a better experience.
error: Content is protected !!