Sunday, July 7, 2024
Homeಟಾಪ್ ನ್ಯೂಸ್WILD ELEPHANT : ಕೆರೆಗೆ ಬಿದ್ದು ಪ್ರಾಣ ಬಿಟ್ಟ ಗಜರಾಜ

WILD ELEPHANT : ಕೆರೆಗೆ ಬಿದ್ದು ಪ್ರಾಣ ಬಿಟ್ಟ ಗಜರಾಜ

ಕಾಫಿ ತೋಟದ ಕೆರೆಗೆ ಬಿದ್ದು ಕಾಡಾನೆಯೊಂದು ಮೃತಪಟ್ಟಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ಅಮ್ಮತ್ತಿ ಸಮೀಪದಲ್ಲಿ ನಡೆದಿದೆ. 

ಒಂಟಿಯಂಗಡಿಯ ಪಚ್ಚಾಟ್ ನ ಮುಕ್ಕಾಟೀರ ನಂದ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಈ ಘಟನೆ ನಡೆದಿದ್ದು, ತೋಟಕ್ಕೆ ನೀರುಣಿಸಲು ಕೆರೆ ತೋಡಲಾಗಿತ್ತು. 

ಕಾಡಾನೆಗಳ ಗುಂಪು ಆಹಾರ ಅರಸಿ ತೋಟಕ್ಕೆ ಬಂದಿದ್ದು,  ಈ ವೇಳೆ 15 ವರ್ಷ ಪ್ರಾಯದ ಗಂಡಾನೆ ನೀರಿಗೆ ಬಿದ್ದು ಮೃತಪಟ್ಟಿದೆ. 

ಸದ್ಯ ಸ್ಥಳಕ್ಕೆ ಅರಣ್ಯ ಇಲಾಖೆ  ಅಧಿಕಾರಿಗಳ ತಂಡ ಭೇಟಿ ನೀಡಿ ಜೆಸಿಬಿ ಮೂಲಕ ಆನೆಯ ಮೃತದೇಹವನ್ನು ಹೊರ ತೆಗೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ರವಾನಿಸಲಾಗಿದೆ. 

ಹೆಚ್ಚಿನ ಸುದ್ದಿ