Sunday, July 7, 2024
HomeದೇಶUdayanidhi stalin: ಇಂದು ಬೆಂಗಳೂರು ಕೋರ್ಟ್ ಗೆ ಉದಯನಿಧಿ ಸ್ಟಾಲಿನ್ ಹಾಜರು

Udayanidhi stalin: ಇಂದು ಬೆಂಗಳೂರು ಕೋರ್ಟ್ ಗೆ ಉದಯನಿಧಿ ಸ್ಟಾಲಿನ್ ಹಾಜರು

ಬೆಂಗಳೂರು: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂದು  ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್‌ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಎದುರು ಹಾಜರಾಗುವ ಸಾಧ್ಯತೆ ಇದೆ.

ಸನಾತನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ಹಿನ್ನೆಲೆಯಲ್ಲಿ 5 ತಿಂಗಳ ಹಿಂದೆ ಸಮನ್ಸ್‌ ನೀಡಿತ್ತು. ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚಿಸಿತ್ತು. ಕಳೆದ ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ನೀಡಿತ್ತು.

ಬೆಂಗಳೂರಿನ ಪರಮೇಶ್ ಎಂಬುವವರು ಉದಯನಿಧಿ ಹೇಳಿಕೆ ವಿರುದ್ಧ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ 42ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರಾದ ಜೆ. ಪ್ರೀತ್ ಅವರಿದ್ದ ಪೀಠ 5 ತಿಂಗಳ ಹಿಂದೆ ಸಮನ್ಸ್‌ ಜಾರಿಗೊಳಿಸಿತ

ಹೆಚ್ಚಿನ ಸುದ್ದಿ