Sunday, July 7, 2024
Homeಟಾಪ್ ನ್ಯೂಸ್VIJAYALAKSHMI DARSHAN : ನನ್ನ ಪ್ರೀತಿಯ ಸಹೋದರರೇ... : ಫ್ಯಾನ್ಸ್‌ಗಾಗಿ ದರ್ಶನ್‌ ಪತ್ನಿ ಪೋಸ್ಟ್‌!

VIJAYALAKSHMI DARSHAN : ನನ್ನ ಪ್ರೀತಿಯ ಸಹೋದರರೇ… : ಫ್ಯಾನ್ಸ್‌ಗಾಗಿ ದರ್ಶನ್‌ ಪತ್ನಿ ಪೋಸ್ಟ್‌!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪದಲ್ಲಿ ನಟ ದರ್ಶನ್ & ಗ್ಯಾಂಗ್ ಸದ್ಯ ಜೈಲು ಸೇರಿದ್ದಾರೆ. ದರ್ಶನ್ ಬಂಧನ ದಿನದಿಂದಲೇ ‘ಡಿ‘ ಬಾಸ್ ಅಭಿಮಾನಿಗಳು ತಮ್ಮ ಬಾಸ್ ಬಗ್ಗೆ ಕಾಳಜಿ ತೋರುತ್ತಿರುವುದು, ಅವರ ಬಗ್ಗೆ ಆತಂಕದಲ್ಲೇ ಕಾಲ ಕಳೆಯುತ್ತಿರುವುದು ಹಾಗೂ ದರ್ಶನ್ ಕಾಣಲು ಜೈಲಿನ ಬಳಿ ಅಭಿಮಾನಿಗಳು ಬರುತ್ತಿರುವುದು ಸಾಮಾನ್ಯವಾಗಿದೆ.

ದರ್ಶನ್ ಅವರನ್ನು ಜೈಲಿನಲ್ಲಿ ಭೇಟಿಯಾದ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ಅವರು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಶೇರ್ ಮಾಡಿದ್ದು ಅಭಿಮಾನಿಗಳನ್ನುದ್ದೇಶಿಸಿ ಸಂದೇಶವನ್ನು ಹಂಚಿಕೊಂಡಿದ್ದಾರೆ

ಪೋಸ್ಟ್ ನಲ್ಲಿರುವಂತೆ.. ‘ನನ್ನ ಪ್ರೀತಿಯ ಸಹೋದರರೇ,
ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ.

ಇದೊಂದು ಪರೀಕ್ಷೆಯ ಸಮಯ. ನನಗೆ,ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನ್‌ಗೆ ತಲುಪಿಸಿದ್ದೇನೆ. ಅವರೂ ನಿಮಗೆ ಪ್ರತಿಕಾಳಜಿ ವ್ಯಕ್ತಪಡಿಸಿದ್ದಾರೆ.

ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ/ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ. ಸತ್ಯಮೇವ ಜಯತೆ!’ ಎಂದು ಬರೆದುಕೊಂಡಿದ್ದಾರೆ.

ಹೆಚ್ಚಿನ ಸುದ್ದಿ